Duryodhana Vilapa Notes Kannada
ದಾನವಚಿಂತಾಮಣಿ” ಬಿರುದಾಂಕಿತ ಅತ್ತಿಮಬ್ಬೆಯ ಪ್ರೋತ್ಸಾಹ ದೊರಕಿತು. ಅಜಿತಸೇನಾಚಾರ್ಯರಿಂದ ವಿದ್ಯೆ ಸಂಪಾದಿಸಿದನು . ಮೊದಲು ಗಂಗರ ಮಂತ್ರಿ ಚಾವುಂಡರಾಯನ ಆಶ್ರಯ ಪಡೆಯುತ್ತಾನೆ . ಗಂಗರ ಪತನಾನಂತರ ಚಾಲುಕ್ಯದೊರೆ ತೈಲಪ ಹಾಗೂ ಸತ್ಯಾಶ್ರಯ ಇವಬೆಡಂಗ ( ಬದ್ದೆಗನ ಆಸ್ಥಾನ ಕವಿಯಾಗಿದ್ದನು .
ಅಜಿತ ತೀರ್ಥಂಕರ ಪುರಾಣ ‘ ಮತ್ತು ‘ ಸಾಹಸಭೀಮವಿಜಯಂ ‘ ಇವನ ಉಪಲಬ್ದ ಕಾವ್ಯಗಳು , ಚಂಪೂ ಶೈಲಿಯ ಕೃತಿಗಳಲ್ಲೊಂದಾದ ‘ ಸಾಹಸಭೀಮ ವಿಜಯಂ’ನಲ್ಲಿ ರನ್ನನು , ಪಂಪ ಕವಿಯು ಅರಿಕೇಸರಿಯನ್ನು ಸಮೀಕರಿಸಿ ಕಾವ್ಯ ರಚಿಸಿದಂತೆ , ‘ ಸಾಹಸಭೀಮ ‘ ಬಿರುದಾಂಕಿತ ಇವಬೆಡಂಗ ಸತ್ಯಾಶ್ರಯನನ್ನು ಭೀಮನೊಂದಿಗೆ ಸಮೀಕರಿಸಿದ್ದಾನೆ . ಮಹಾಭಾರತದ ಕುರುಕ್ಷೇತ್ರ ಯುದ್ಧದ ದೃಶ್ಯವೇ ಮುಖ್ಯ ಕಥಾವಸ್ತುವಾದರೂ , ಇಡೀ ಮಹಾಭಾರತವನ್ನು ಸಿಂಹಾವಲೋಕನ ಕ್ರಮದಲ್ಲಿ ನಿರೂಪಿಸಿದ್ದಾನೆ . ಇವನ ಇಡೀ ಕಾವ್ಯದಲ್ಲಿ ನಾಟಕೀಯ ಶೈಲಿಯನ್ನು ಕಾಣಬಹುದು .
ಮಹಾಭಾರತ ಯುದ್ಧದಲ್ಲಿ ತನ್ನವರೆಲ್ಲರನ್ನೂ ಕಳೆದುಕೊಂಡ ದುರ್ಯೋಧನನು ಯುದ್ಧಭೂಮಿಯಲ್ಲಿ ಶರಶಯ್ಯೆಯಲ್ಲಿದ್ದ ತಾತ ಭೀಷ್ಮನನ್ನು ಭೇಟಿ ಮಾಡಲು ಸಂಜಯನೊಡನೆ ಬರುತ್ತಾನೆ . ಸತ್ತು ಬಿದ್ದಿರುವ ವೈರಿಪಕ್ಷದ ವೀರ ಅಭಿಮನ್ಯುವನ್ನು ಪ್ರಶಂಸಿಸುವ ಅವನ ಮನೋಧರ್ಮ ಮೆಚ್ಚತಕ್ಕದ್ದಾಗಿದೆ . ಗುರು ದ್ರೋಣ , ತಮ್ಮ ದುಶ್ಯಾಸನ , ಮಗ ಲಕ್ಷಣಕುಮಾರ ಮತ್ತು ಪ್ರಾಣ ಸ್ನೇಹಿತ ಕರ್ಣರ ಕಳೇಬರಗಳನ್ನು ಕಂಡು ದುರ್ಯೊಧನ ಪಡುವ ದುಃಖ ದುಮಾನ ಹಾಗೂ ಪ್ರಲಾಪಗಳು ಪ್ರಸ್ತುತ ಕಾವ್ಯ ಭಾಗದಲ್ಲಿ ಕರುಳು ಮಿಡಿಯುವಂತೆ ಚಿತ್ರಿತವಾಗಿವೆ .
Duryodhana Vilapa Notes Quotion answer in Kannada
I. ಒಂದು ವಾಕ್ಯದಲ್ಲಿ ಉತ್ತರಿಸಿ .
1. ರಣರಂಗದಲ್ಲಿ ಸಾಗುವಾಗ ದುರ್ಯೋಧನ ಯಾರ ನೆರವನ್ನು ಅವಲಂಬಿಸಿದ್ದನು ?
Ans: ರಣರಂಗದಲ್ಲಿ ಸಾಗುವಾಗ ದುರ್ಯೋಧನನು ಸಂಜಯನ ನೆರವನ್ನು ಅವಲಂಬಿಸಿದ್ದನು .
2. ಕುರುಪತಿ ರಣರಂಗದಲ್ಲಿ ಏನನ್ನು ಮೆಟ್ಟಿ ನಡೆದನು ?
Ans: ಕುರುಪತಿ ರಣರಂಗದಲ್ಲಿ ( ಬಾರಿಗಾತ್ರದ ) ಹೆಣಗಳ ಮೇಲೆ ಕಾಲಿಟ್ಟು ನಡೆಯುತ್ತಿದ್ದನು .
3. ಪಿನಾಕ ಪಾಣಿ ಎಂದರೆ ಯಾರು ?
Ans: ಪಿನಾಕ ಎಂಬ ದನಸ್ಸನ್ನು ಹಿಡಿದಿರುವ “ ಶಿವ ”
4. ತಂದೆಗೆ ಜಲಾಂಜಲಿಯನ್ನು ಯಾರು ಕೊಡಬೇಕು ?
Ans: ತಂದೆಗೆ ಜಲಾಂಜಲಿಯನ್ನು ಮಗನು ಕೊಡಬೇಕು .
5. ಚಕ್ರವ್ಯೂಹವನ್ನು ರಚಿಸಿದವರು ಯಾರು ?
Ans: ಚಕ್ರವ್ಯೂಹವನ್ನು ರಚಿಸಿದವರು ದ್ರೋಣಾಚಾರ್ಯರು .
6. ದಿವ್ಯಜ್ಞಾನಿ ಎಂದು ಯಾರನ್ನು ಕರೆಯಲಾಗಿದೆ ?
Ans: ದಿವ್ಯಜ್ಞಾನಿ ಎಂದು ಸಹದೇವನನ್ನು ಕರೆಯಲಾಗಿದೆ .
7. ಹರಿಯು ಕರ್ಣನಿಂದ ಬೇಡಿದೇನು ?
Ans: ಹರಿಯು ಕರ್ಣನಿಂದ ಬೇಡಿದ್ದು ‘ ಕವಚವನ್ನು
8. ಅಂಗಾಧಿಪತಿ ಯಾರು ?
Ans: ಅಂಗಾಧಿಪತಿ ಕರ್ಣ
You can download the Duryodhana Vilapa Notes in Kannada PDF using the link given below.