Republic Day Speech in Kannada Kannada
ಗಣರಾಜ್ಯೋತ್ಸವ ದಿನ, ಪ್ರತಿಯೊಬ್ಬ ಭಾರತೀಯ ಪ್ರಜೆಯು ಹೆಮ್ಮೆ ಪಡುವ ದಿನವಾಗಿದೆ. ಪ್ರತಿ ವರ್ಷ ಭಾರತದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತದ ಇತಿಹಾಸದಲ್ಲೇ ಗಣರಾಜ್ಯೋತ್ಸವ ದಿನ ಮಹತ್ವದ ದಿನವಾಗಿದೆ. ಈ ದಿನದಂದು ಇಡೀ ದೇಶವೇ ಸಂಭ್ರಮಿಸುತ್ತದೆ. ಈ ದಿನವು ದೇಶ ಸ್ವಾತಂತ್ರ್ಯೋತ್ತರ ಗಣರಾಜ್ಯ ದೇಶವಾದ ಐತಿಹಾಸಿಕ ದಿನ ಮತ್ತು ಸಂವಿಧಾನ ಜಾರಿಗೆ ಬಂದ ದಿನವಾಗಿದೆ. 2024 ನೇ ಇಸವಿಯಲ್ಲಿ ಇರುವ ಭಾರತೀಯರಾದ ನಾವೆಲ್ಲರೂ ಜನವರಿ 26, 2024 ರಂದು 75ನೇ ಗಣರಾಜ್ಯೋತ್ಸವ ಆಚರಣೆಗೆ ಸಜ್ಜಾಗಿದ್ದೇವೆ.
ಕಳೆದ ಎರಡು ಮೂರು ವರ್ಷಗಳಿಂದ ಕೋವಿಡ್ ಹಿನ್ನಲೆಯಲ್ಲಿ ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನಲೆಯಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಣೆ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿವೆ.
ಗಣರಾಜ್ಯೋತ್ಸವ ಭಾಷಣ ಕನ್ನಡ
ವೀರ ಶಿವಾಜಿ ಮಹಾರಾಜ್, ಮಹಾರಾಣಾ ಪ್ರತಾಪ್ ಮತ್ತು ಸ್ವಾಮಿ ವಿವೇಕಾನಂದರಂತಹ ವೀರ ಪುರುಷರ ಈ ನಾಡು ಯಾವಾಗಲೂ ಚಿನ್ನದ ಹಕ್ಕಿಯಂತೆ ಬೆಳಗಲಿ.
ನಮ್ಮ ದೇಶದ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರು ಮಹಾತ್ಮಾ ಗಾಂಧಿ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್, ಲಾಲಾ ಲಜಪತ್ ರಾಯ್, ಸರ್ದಾರ್ ವಲ್ಲಭಭಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಮುಂತಾದವರು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಮಾಡಲು, ಈ ಜನರು ನಿರಂತರವಾಗಿ ಹೋರಾಡಿದರು. ಬ್ರಿಟಿಷರು, ನಮ್ಮ ದೇಶಕ್ಕಾಗಿ ಅವರ ಸಮರ್ಪಣೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ.
ಇಂದು ಇಡೀ ದೇಶ 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಗಣರಾಜ್ಯೋತ್ಸವವು ಒಂದು ಪ್ರಮುಖ ರಾಷ್ಟ್ರೀಯ ಹಬ್ಬವಾಗಿದೆ. ಈ ದಿನ, ಇಡೀ ದೇಶವು ವಂದೇ ಮಾತರಂ ಮತ್ತು ಜನ-ಗಣ-ಮನ ದೊಂದಿಗೆ ಪ್ರತಿಧ್ವನಿಸುತ್ತದೆ.
ಗಣರಾಜ್ಯೋತ್ಸವವನ್ನು ಶಾಲೆಯಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಸಾಮಾಜಿಕ ಸ್ಥಳಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಈ ಶುಭ ಸಂದರ್ಭದಲ್ಲಿ ಇಂದು ನಿಮ್ಮನ್ನು ಉದ್ದೇಶಿಸಿ, ಆ ಮಹಾನ್ ಕ್ರಾಂತಿಕಾರಿಗಳಿಗೆ ನನ್ನ ಗೌರವ ಮತ್ತು ಶ್ರದ್ಧಾಂಜಲಿಗಳನ್ನು ಸಲ್ಲಿಸುವ ಮೂಲಕ ನನ್ನ ಭಾಷಣವನ್ನು ಕೊನೆಗೊಳಿಸುತ್ತೇನೆ.
ನಿಮ್ಮೆಲ್ಲರಿಗೂ ತುಂಬಾ ಧನ್ಯವಾದಗಳು
ಭಾರತ್ ಮಾತಾ ಕಿ ಜೈ… ಜೈ ಹಿಂದ್
Republic Day Speech 2024 in Kannada
- ಈ ಕಾರ್ಯಕ್ರಮದಲ್ಲಿ ಆಸೀನರಿರುವ ನನ್ನ ಗುರುವೃಂದದವರಿಗೆ ಹಾಗೂ ನನ್ನ ನೆಚ್ಚಿನ ಸಹಪಾಠಿಗಳೆಲ್ಲರಿಗೂ 75ನೇ ಗಣರಾಜ್ಯೋತ್ಸವ ದಿನದ ಶುಭಾಶಯಗಳು.
- ಈ ಶುಭ ದಿನದಂದು ಗಣರಾಜ್ಯೋತ್ಸವದ ಕುರಿತು ಒಂದೆರಡು ಮಾತನಾಡಲು ನನಗೆ ಅವಕಾಶ ಸಿಕ್ಕಿದ್ದು, ನನಗೆ ತುಂಬಾ ಸಂತೋಷವಾಗಿದೆ.
- ಸ್ನೇಹಿತರೆ ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು.
- ಈ ದಿನವನ್ನು ಸಂಭ್ರಮಿಸಲು ನಾವು ಪ್ರತಿ ವರ್ಷ ಈ ದಿನಾಂಕದಂದು ಗಣರಾಜ್ಯೋತ್ಸವವನ್ನು ಆಚರಣೆ ಮಾಡುತ್ತೇವೆ.
- ಅಂತೆಯೇ ನಾವಿಂದು 75ನೇ ಗಣರಾಜ್ಯೋತ್ಸವ ದಿನವನ್ನು ಆಚರಣೆ ಮಾಡುತ್ತಿದ್ದೇವೆ.
- ಈ ದಿನಕ್ಕೆ ಅಷ್ಟೊಂದು ಮಹತ್ವ ಏಕೆ ಎಂದರೆ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ದೇಶದ ಪ್ರತಿಯೊಬ್ಬ ಪ್ರಜೆಗೂ ಸಹ ಸಮಾನ ಶಿಕ್ಷಣ, ಪ್ರತಿಯೊಬ್ಬರಿಗೂ ಬೇಕಾದ ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ಇವೆಲ್ಲವೂ ಸಹ ಸಿಕ್ಕಿದ್ದು.
- ಸಂವಿಧಾನ ಎಂಬುದು ಭಾರತದ ಸರ್ವೋಚ್ಛ ಕಾನೂನು.
- ನಮ್ಮ ಸಂವಿಧಾನವು ರಷ್ಯಾ, ಬ್ರಿಟನ್, ಅಮೆರಿಕಾ, ಇತರೆ ದೇಶಗಳ ಸಂವಿಧಾನಗಳ ಅಂಶಗಳನ್ನು ಹೊಂದಿದ್ದು, ಅವುಗಳ ಸಂಯೋಜನೆ ಆಗಿದೆ.
- ಇದೊಂದು ಬೃಹತ್ ಸಂವಿಧಾನವಾಗಿದ್ದು, ಇದರ ಜಾರಿಗೆ ಮಹತ್ವದ ಕೊಡುಗೆ ನೀಡಿದವರು ಡಾ ಬಿ.ಆರ್.ಅಂಬೇಡ್ಕರ್ ರವರು.
- ಆದ್ದರಿಂದ ಅಂಬೇಡ್ಕರ್ ರನ್ನು ಭಾರತ ಸಂವಿಧಾನದ ಪಿತಾಮಹರು ಎನ್ನಲಾಗುತ್ತದೆ.
- ನಾವು ಈ ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ಮೂಲಭೂತ ಹಕ್ಕುಗಳಂತೆ, ದೇಶದ ಪ್ರಜೆಗಳಾಗಿ ಇದರಲ್ಲಿ ನೀಡಲಾದ ಮೂಲಭೂತ ಕರ್ತವ್ಯಗಳನ್ನು ಸಹ ಪಾಲಿಸಬೇಕು.
- ಪ್ರತಿವರ್ಷವು ಸಹ ಈ ದಿನವನ್ನು ಆಚರಿಸಿ, ಧ್ವಜಾರೋಹಣ ಮಾಡಿ ಗೌರವವನ್ನು ಸಲ್ಲಿಸಬೇಕು.
- ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ ನಮ್ಮ ಸಂವಿಧಾನದಲ್ಲಿ ಇರುವ ಐದು ಪ್ರಮುಖ ಮೌಲ್ಯಗಳಾಗಿವೆ.
- You can download the ಗಣರಾಜ್ಯೋತ್ಸವ ಭಾಷಣ ಕನ್ನಡ PDF using the link given below.